ಪ್ರಜಾಸ್ತ್ರ ಸುದ್ದಿ
ಹಾಸನ: ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಚುನಾವಣೆಯ ಕಾವು ಮತ್ತಷ್ಟು ಜೋರಾಗಲಿದೆ. ಈಗಾಗ್ಲೇ ಹಾಸನದಲ್ಲಿ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ದೇವೇಗೌಡರ ಕುಟುಂಬದಲ್ಲಿ ಜಟಾಪಟಿ ನಡೆದಿದೆ. ಈ ಕುರಿತು ಮಾತನಾಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಅಮ್ಮನಿಗೆ ಟಿಕೆಟ್ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಹಾಸನದಿಂದ ಸ್ಪರ್ಧಿಸಲು ಭವಾನಿ ರೇವಣ್ಣ ಸಿದ್ಧತೆ ನಡೆಸಿದ್ದು ಟಿಕೆಟ್ ಗೆ ಭಾರೀ ಫೈಟ್ ನಡೆದಿದೆ. ತಾಯಿ ಪರ ಮಗ ನಿಂತಿದ್ದು, ಟಿಕೆಟ್ ನೀಡದಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ಎಂದಿದ್ದಾರೆ. ಈ ಮೂಲಕ ಇಲ್ಲಿ ವೋಟ್ ಹಾಕಿ ಗೆಲ್ಲಿಸಿದ ಮತದಾರರಿಗೆ ಕಿಮ್ಮತ್ತು ಇಲ್ಲದಾಗಿದೆ.
ಪ್ರಜ್ವಲ್ ರೇವಣ್ಣ ಹೇಳಿಕೆಗೆ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಯಾವುದೇ ರೀತಿಯ ಬ್ಲ್ಯಾಕ್ ಮೇಲ್ ನಡೆಯಲ್ಲ. ನನ್ನ ನಿರ್ಧಾರದಲ್ಲಿ ಬದಲಾವಣೆ ಇಲ್ಲ ಎಂದಿದ್ದಾರೆ. ಈ ಮೂಲಕ ಹಾಸನ ಜೆಡಿಎಸ್ ಟಿಕೆಟ್ ವಿಚಾರ ದೇವೇಗೌಡರ ಕುಟುಂಬದಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ.