ಪ್ರಜಾಸ್ತ್ರ ಸುದ್ದಿ
ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಅತ್ಯಾಚಾರ ಹಾಗೂ ಹತ್ಯೆಗೆ ಸಂಬಂಧಿಸಿದಂತೆ ದೇಶದ ತುಂಬಾ ವ್ಯಾಪಾಕ ಆಕ್ರೋಶ ವ್ಯಕ್ತವಾಗ್ತಿದೆ. ಪ್ರತಿಭಟನೆ ಸಹ ನಡೆಯುತ್ತಿವೆ. ಅಲ್ದೇ, ಸಂತ್ರಸ್ತೆಯ ಅಂತ್ಯಸಂಸ್ಕಾರವನ್ನ ಮಧ್ಯರಾತ್ರಿ ಪೊಲೀಸರು ನಡೆಸಿದ್ದು, ಮಾನವ ಹಕ್ಕುಗಳ ವಿರುದ್ಧವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಪಂಕಜ್ ಮಿತ್ತಲ್, ರಂಜನ್ ರಾಯ್ ಇದ್ದ ವಿಭಾಗೀಯ ಪೀಠ, ಸಂತ್ರಸ್ತೆಯ ಮೃತದೇಹವನ್ನ ಕುಟುಂಬಸ್ಥರಿಗೆ ನೀಡದೆ ಅಂತ್ಯಸಂಸ್ಕಾರ ಮಾಡಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾನೂನು ಸುವ್ಯವಸ್ಥೆ ನೆಪದಲ್ಲಿ ಹೀಗೆ ನಡೆದುಕೊಂಡಿರುವುದು ಸರಿಯಲ್ಲ.
ದಹನ ಕ್ರಿಯೆ ಸಂಸ್ಕಾರಗಳಲ್ಲಿ ಒಂದಾಗಿದೆ. ಇದಕ್ಕೆ ಕಾನೂನು ಸುವ್ಯವಸ್ಥೆ ನೀಡಿ ರಾಜಿ ಸಂಧಾನ ಮಾಡಿಕೊಳ್ಳಲು ಬರುವುದಿಲ್ಲವೆಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.