‘ಹಿಂದು ಧರ್ಮದ ರಕ್ಷಕರು ಗೌರವಯುತ ಅಂತ್ಯಕ್ರಿಯೆಗೂ ಅವಕಾಶ ಕೊಡ್ಲಿಲ್ಲ’

302

ಪ್ರಜಾಸ್ತ್ರ ಸುದ್ದಿ

ಲಖ್ನೋ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ಯುವತಿ ಮನೀಷಾ ವಾಲ್ಮೀಕಿ ಅನ್ನೋ ಯುವತಿ ಮೇಲಿನ ಅತ್ಯಾಚಾರ ಹಾಗೂ ರಾತ್ರೋರಾತ್ರಿ ಪೊಲೀಸರು ಅಂತ್ಯಕ್ರಿಯೆ ಮಾಡಿರುವುದನ್ನ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ. ಮಹಿಳೆಯರ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತೆ ಎಂದಿದ್ದಾರೆ.

ಯುವತಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಘಟನೆಯ ಜವಾಬ್ದಾರಿಯನ್ನ ಸಿಎಂ ಯೋಗಿ ಆದಿತ್ಯನಾಥ ಹೊತ್ತುಕೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಬೇಕು ಎಂದಿದ್ದಾರೆ. ಅಲ್ದೇ, ಸಂತ್ರಸ್ತೆಯ ಕುಟುಂಬಸ್ಥರ ಭೇಟಿಗೆ ಹೋದಾಗ ತಮ್ಮನ್ನು ತಡೆಯಲಾಗಿದೆ ಎಂದಿದ್ದಾರೆ. ಹೀಗಾಗಿ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ ಗಾಂಧಿ ದೆಹಲಿಗೆ ವಾಪಸ್ ಆಗಿದ್ದಾರೆ.

ಇನ್ನು ಹಿಂದು ಧರ್ಮದ ರಕ್ಷಕರು ಎಂದು ಹೇಳಿಕೊಳ್ಳುವವರು, ಗೌರವಯುತವಾಗಿ ಆಕೆಯ ಅಂತ್ಯಕ್ರಿಯೆಯನ್ನು ಸಹ ಮಾಡಲು ಅವರ ಕುಟುಂಬಕ್ಕೆ ಅವಕಾಶ ಮಾಡಿಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದ್ರು. ಈ ಘಟನೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಸಹ ಅನ್ಯಾಯ ಮಾಡಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ ಕಾರಿದ್ದಾರೆ.




Leave a Reply

Your email address will not be published. Required fields are marked *

error: Content is protected !!