ಹತ್ರಾಸ್ ಸಂತ್ರಸ್ತೆಯ ರಾತ್ರೋ ರಾತ್ರಿ ಅಂತ್ಯಸಂಸ್ಕಾರ: ರಾಹುಲ, ಪ್ರಿಯಾಂಕಾ ಕಿಡಿ

271

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ಪ್ರದೇಶದಲ್ಲಿ ದಲಿತ ಯುವತಿಯನ್ನ ಸಾಮೂಹಿಕ ಅತ್ಯಾಚಾರವೆಸಗಿ, ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಅಲ್ದೇ, ಮಂಗಳವಾರ ಮಧ್ಯರಾತ್ರಿ ಬುಧವಾರ ಮುಂಜಾನೆ 2.30ಕ್ಕೆ ಪೊಲೀಸರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಇದಕ್ಕೆ ರಾಹುಲ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ ಕಾರಿದ್ದಾರೆ.

ಭಾರತದ ಪುತ್ರಿಯೊಬ್ಬಳ್ಳನ್ನ ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ. ಮಗಳ ಅಂತ್ಯಸಂಸ್ಕಾರದ ಹಕ್ಕನ್ನು ಸಹ ಕಿತ್ತುಕೊಳ್ಳಲಾಗಿದೆ. ಇದು ಅನ್ಯಾಯವೆಂದು ಕಾಂಗ್ರೆಸ್ ಯುವ ನಾಯಕ ರಾಹುಲ ಗಾಂಧಿ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಈ ಟ್ವೀಟ್ ನ್ನ ಉಲ್ಲೇಖಿಸಿ ಸಹೋದರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಂತ್ರಸ್ತೆಯ ಅಂತ್ಯಸಂಸ್ಕಾರ ವಿಚಾರದಲ್ಲಿ ಮನೆಯವರೊಂದಿಗೆ ಅಮಾನವೀಯವಾಗಿ ನಡೆದುಕೊಂಡಿದೆ. ಹೀಗಾಗಿ ಸಿಎಂ ಯೋಗಿ ಆದಿತ್ಯನಾಥ ರಾಜೀನಾಮೆ ನೀಡಬೇಕು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!