ಪ್ರಜಾಸ್ತ್ರ ಸುದ್ದಿ
ಕನ್ನಡ ಚಿತ್ರರಂಗದ ನಿರ್ಮಾಪಕ ಹಾಗೂ ಅಂಬರೀಶ ಕುಟುಂಬದ ಆಪ್ತ ರಾಕ್ ಲೈನ್ ವೆಂಕಟೇಶ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ. ಚುನಾವಣೆ ಸಂದರ್ಭದಲ್ಲಿನ ಸಿಸಿ ಟಿವಿ ದೃಶ್ಯಗಳನ್ನಿಟ್ಟುಕೊಂಡು ಆಡಿಯೋ ವಿಡಿಯೋ ಎಂದು ಬೆದರಿಕೆ ಹಾಕುವ ಕೆಲಸ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.
ಚುನಾವಣೆ ಸಂದರ್ಭದಲ್ಲಿ ಸುಮಲತಾ ಅವರೊಂದಿಗೆ ನಾನು ಸೇರಿ ಹಲವರು ಮಂಡ್ಯದ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದೇವು. ಅಲ್ಲಿ ನಾವು ಓಡಾಡಿದ ಸಿಸಿ ಟಿವಿ ದೃಶ್ಯಗಳಿಗೆ ಅಶ್ಲೀಲ ದೃಶ್ಯ ಸೇರಿಸುವ ಪ್ಲಾನ್ ಮಾಡಿದ್ದರು. ಈ ಬಗ್ಗೆ ಅವರ ಚಾನಲ್ ನಲ್ಲಿದ್ದ ಅಂಬರೀಶ ಅಭಿಮಾನಿಯೊಬ್ಬರು ನನಗೆ ಮಾಹಿತಿ ನೀಡಿದ್ದರು. ಬಳಿಕ ಅದನ್ನ ಕೈಬಿಟ್ಟರು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಿಸಿಟಿವಿ ದೃಶ್ಯಗಳನ್ನ ತಮ್ಮ ರಾಜಕೀಯಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದೆಂತ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ರಾಕ್ ಲೈನ್ ವೆಂಕಟೇಶ ಆಕ್ರೋಶ ವ್ಯಕ್ತಪಡಿಸಿದ್ದಾರೆ.