ಪ್ರಜಾಸ್ತ್ರ ಸುದ್ದಿ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅವರು ಕರ್ನಾಟಕ ಖಾಲಿ ಮಾಡದಿದ್ದರೆ ಬಿಜೆಪಿ ಸೇರುವುದಾಗಿ ಸಿದ್ದರಾಮಯ್ಯ ಹೈಕಮಾಂಡ್ ಗೆ ಬೆದರಿಕೆ ಹಾಕಿದ್ದರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಸಮಾಜದ ನಾಯಕರ ಏಳಿಗೆಯನ್ನು ಸಿದ್ದರಾಮಯ್ಯ ಸಹಿಸಲ್ಲ. ಮುಖ್ಯಮಂತ್ರಿಯಾಗಲು ತಮಗೆ ಅಡ್ಡಿಯಾಗುತ್ತಾರೆ ಎಂದು ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು ಎಂದು ಪ್ರಶ್ನಿಸಿದರು.
ನಾನು ಸಿಎಂ ಆಗಿದ್ದಾಗ ಯಾರ ಫೋನ್ ಟ್ಯಾಪ್ ಮಾಡಿಸಿಲ್ಲ. ಮೈತ್ರಿ ಸರ್ಕಾರ ಬಂದ 15 ದಿನಗಳಲ್ಲೇ ಡಿ.ಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ನಡುವೆ ಯಾರಿಗೋಸ್ಕರ ಕಲಹ ಶುರುವಾಯಿತು ಹೇಳಲಿ ಎಂದು ವಾಗ್ದಾಳಿ ನಡೆಸಿದರು.