ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸವಾಲ್.. ಯಡಿಯೂರಪ್ಪ ಹೇಳಿದ್ದೇನು?

199

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಐಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಯೆ ನೀಡಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಹುಟ್ಟು ಹಬ್ಬದ ದಿನ ಹೊರತು ಬೇರೆ ಕಾರಣಕ್ಕೆ ಭೇಟಿಯಾಗಿಲ್ಲವೆಂದಿದ್ದಾರೆ.

ಅಧಿಕಾರದಲ್ಲಿರುವವರನ್ನು ನಾನು ಯಾವತ್ತೂ ಭೇಟಿ ಮಾಡಿಲ್ಲ. ಹಾಗೇ ಭೇಟಿ ಮಾಡುವವರು ಕುಮಾರಸ್ವಾಮಿ. ನಾನು, ಯಡಿಯೂರಪ್ಪ ಭೇಟಿ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಸಾಬೀತು ಮಾಡಲಿ. ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಇನ್ನು ಯಡಿಯೂರಪ್ಪ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದು, ನನ್ನ ಹುಟ್ಟು ಹಬ್ಬದ ಕಾರ್ಯಕ್ರಮ ಹೊರತುಪಡಿಸಿ ಅವರನ್ನು ವೈಯಕ್ತಿಕವಾಗಿ ನಾನು ಭೇಟಿಯಾಗಿಲ್ಲ. ಅದರ ಅಗತ್ಯವೂ ಇಲ್ಲವೆಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!