ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ಥಾನವನ್ನು ಪುಟಗೋಸಿ ಎಂದು ಕರೆದಿದ್ದು, ಇದಕ್ಕೆ ಕಾಂಗ್ರೆಸ್ ನಾಯಕ ವಿ.ಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ. ಎರಡು ಬಾರಿ ಸಿಎಂ ಆಗಿದ್ದವರು. ಅವರ ತಂದೆ ಪ್ರಧಾನಿ ಆಗಿದ್ದವರು. ಅಂತವರ ಈ ರೀತಿ ಹೇಳಿಕೆ ಶೋಭೆ ತರುವುದಿಲ್ಲವೆಂದರು.
ಸದನದಲ್ಲಿ ವಿಪಕ್ಷ ಸ್ಥಾನಕ್ಕೆ ಅದರದೆಯಾದ ಗೌರವವಿದೆ. ಕುಮಾರಸ್ವಾಮಿ ವಿರುದ್ಧ ಸಭಾಪತಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಸಮಿಶ್ರ ಸರ್ಕಾರವಿದ್ದಾಗ ಅವರೆ ಸದನದಲ್ಲಿ ಸರ್ಕಾರ ಕೆಡವಲು ಬಿಜೆಪಿ ತಂತ್ರ ರೂಪಿಸಿದೆ ಎಂದಿದ್ದರು. ಈಗ ಇನ್ನೊಬ್ಬರ ಹೆಸರಿಗೆ ಕೆಸರು ಎರಚಚೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.