ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಬ್ರಾಹ್ಮಣ ಹೇಳಿಕೆ ವಿಚಾರ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಹೀಗಾಗಿ ರಾಜಕೀಯ ಮೇಲಾಟಗಳು ನಡೆದಿದ್ದು, ನಾನು ಕೊಟ್ಟು ಹೇಳಿಕೆಗೆ ಕ್ಷಮೆ ಕೇಳುವುದಿಲ್ಲ. ತಾಕತ್ತಿದ್ದರೆ ನಾನು ಹೇಳಿದ ವ್ಯಕ್ತಿಯನ್ನು ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಲಿ ಅಂತಾ ಸವಾಲು ಹಾಕಿದ್ದಾರೆ.
ಬಿಜೆಪಿಯವರು ಯಾರನ್ನು ಬೇಕಾದರೂ ಸಿಎಂ ಅಭ್ಯರ್ಥಿ ಎಂದು ಹೇಳಲಿ. ಬೇಕಾದರೆ ಪ್ರಹ್ಲಾದ್ ಜೋಶಿ ಅವರನ್ನೇ ಸಿಎಂ ಮಾಡುತ್ತೇವೆ ಎಂದು ಘೋಷಿಸಲಿ. ಈ ನಿರ್ದಿಷ್ಟ ವ್ಯಕ್ತಿಯ ಬಗ್ಗೆ ತಕರಾರು ಇಲ್ಲ. ಅವರ ಮೂಲದ ಬಗ್ಗೆ ತಕರಾರು ಇರುವುದು ಎಂದಿದ್ದಾರೆ. ಈ ಮಾತುಗಳಿಂದಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವೆ ಮಾತಿನ ಸಮರ ನಡೆದಿದೆ.