ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಐಸಿಯುನಿಂದ ಜನರಲ್ ವಾರ್ಡ್ ಗೆ ಶಿಫ್ಟ್ ಆಗಿದ್ದಾರೆ.
ಮನೆಗೆ ಹೋದ ನಂತರ ಹೆಚ್ಚು ಆಯಾಸ ಪಡಬಾರದು. ಪ್ರವಾಸ ಕೈಗೊಳ್ಳಬಾರದು, ವಿಶ್ರಾಂತಿ ಪಡೆಯಬೇಕೆಂದು ಹೇಳಿದ್ದಾರೆ. ಆರೋಗ್ಯದ ಕಡೆ ಸ್ವಲ್ಪ ಗಮನಹರಿಸಬೇಕು ಎಂದು ತಿಳಿಸಲಾಗಿದೆ.
ಮೆದುಳು ಸ್ಟ್ರೋಕ್ ಗೆ ಒಳಗಾಗಿದ್ದ ಕುಮಾರಸ್ವಾಮಿ ಅವರು ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ನಿರಂತರ ಕಾರ್ಯಕ್ರಮಗಳಲ್ಲಿ ಭಾಗಿ, ವಿದೇಶಿ ಪ್ರವಾಸದಿಂದಾಗಿ ಈ ರೀತಿಯಾಗಿದೆ ಎಂದು ಹೇಳಲಾಗಿದೆ.