ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ರಾಮ ಮಂದಿರ ನಿರ್ಮಾಣ ಸಂಬಂಧ ಯಾರಿಂದಲೂ ಬಲವಂತವಾಗಿ ಹಣ ಸಂಗ್ರಹ ಮಾಡುತ್ತಿಲ್ಲ. ವಿರೋಧ ಪಕ್ಷದವರ ಹೇಳಿಕೆ ಅರ್ಥವಿಲ್ಲದ್ದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನೀವು ಮಾತನಾಡುತ್ತಿರುವುದು ಸುಪ್ರೀಂ ಕೋರ್ಟ್ ಗೆ ವಿರುದ್ಧವಾಗಿದೆ. ನೀವು ಸ್ವಲ್ಪ ಸುಮ್ಮನಿರಿ. ಇದ್ರಿಂದ ದೇಶಕ್ಕೆ ರಾಜ್ಯಕ್ಕೆ ಒಳ್ಳೆಯದು ಎಂದರು.
ಶಿವಮೊಗ್ಗ ಹೊರವಲಯದ ಮಾಚೇನಹಳ್ಳಿ ಕೈಗಾರಿಕೆ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ಮಾಡಿದರು. ಈ ವೇಳೆ ಮಾತ್ನಾಡಿದ ಅವರು, ವಿರೋಧ ಪಕ್ಷದ ನಾಯಕರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ರು. ಅಯೋಧ್ಯ ಬಿಟ್ಟು ಬೇರೆ ಕಡೆ ರಾಮ ಮಂದಿರ ನಿರ್ಮಾಣ ಮಾಡಿ ಎಂದರೆ ಅದು ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿದಂತೆ ಎಂದರು.