ಪ್ರಜಾಸ್ತ್ರ ಸುದ್ದಿ
ರಾಮನಗರ: ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸೇರಿದ ತೋಟದ ಮನೆಯಲ್ಲಿ ಬಾಡೂಟದ ವ್ಯವಸ್ಥೆ ಮಾಡಿರುವುದು ಕಂಡು ಬಂದಿದೆ. ಸ್ಥಳಕ್ಕೆ ಚುನಾವಣಾಧಿಕಾರಿಗಳು ತೆರಳಿ ಶಾಮಿಯಾನ, ಕುರ್ಚಿ ತೆಗೆಸಿದರು.
ತಾಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದಲ್ಲಿ ಬುಧವಾರ ಊಟದ ವ್ಯವಸ್ಥೆ ಮಾಡಲಾಗಿತ್ತು. ಯುಗಾದಿ ಹಬ್ಬದ ಪ್ರಯುಕ್ತ ಮನೆಗೆ ಬರುವ ಸಂಬಂಧಿಕರ ಸಲುವಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು ಎಂದು ಅಲ್ಲಿನವರು ಚುನಾವಣಾಧಿಕಾರಿಗಳ ಮುಂದೆ ಹೇಳಿದ್ದಾರಂತೆ.
ಇನ್ನೊಂದು ಕಡೆ ಚುನಾವಣೆ ಹಿನ್ನಲೆಯಲ್ಲಿ ಸಭೆ ಕರೆಯಲಾಗಿತ್ತು. ಸಭೆಗೆ ಬಂದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಸಭೆಗೆ ಸಂಬಂಧಪಟ್ಟವರಿಂದ ಅನುಮತಿ ಪಡೆದಿರಲಿಲ್ಲವಂತೆ. ಹೀಗಾಗಿ ತಡವಾಗಿ ಬಂದವರು ವಾಪಸ್ ಆಗಿದ್ದಾರೆ. ಈ ವೇಳೆ ತೋಟದಲ್ಲಿ ಕುಮಾರಸ್ವಾಮಿ ಆಗಲಿ, ಅವರ ಕುಟುಂಬಸ್ಥರು ಯಾರು ಇರಲಿಲ್ಲ.