ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆರೋಗ್ಯ ಇಲಾಖೆಯ ಮಹತ್ವದ ಯೋಜನೆಗಳಾದ ಅಪ್ಪು ಹೃದಯ ಜ್ಯೋತಿ, ಶುಚಿ ಹಾಗೂ ಗೃಹ ಆರೋಗ್ಯ ಯೋಜನೆಗಳ ಜಾರಿಗೆ ಸಿದ್ಧತೆ ನಡೆದಿದೆ. ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ.
ಆರೋಗ್ಯ ಸೌಧದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಇದೇ ವೇಳೆ ವೈದ್ಯರು, ನರ್ಸ್, ಸಿಬ್ಬಂದಿಗಳ ನೇಮಕ ವಿಚಾರ ಚರ್ಚಿಸಲಾಯಿತು. ಇನ್ನು ಹೊಸ ಮೂರು ಯೋಜನೆಗಳನ್ನು ಶೇಕಡ 85ರಷ್ಟು ಸರ್ಕಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ, 50ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಲ್ಲಿ ಜಾರಿಗೆ ತರುವ ಕೆಲಸ ನಡೆದಿದೆ ಎಂದರು.