ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಪುಟದಿಂದ ಆರೋಗ್ಯ ಸಚಿವ ಡಾ.ಕೆ ಸುಧಾಕರ ಅವರನ್ನ ಕೈ ಬಿಡಲಾಗ್ತಿದೆ ಎಂದು ಹೇಳಲಾಗ್ತಿದೆ. ಗೌರ್ವನರ್ ವಜುಭಾಯಿ ವಾಲಾ ಅವರು, ಸಚಿವ ಸುಧಾಕರ ಅವರನ್ನ ಸಂಪುಟದಿಂದ ಕೈ ಬಿಡಬೇಕು ಅನ್ನೋ ಸಲಹೆ ನೀಡಿದ್ದಾರೆ ಎನ್ನಲಾಗ್ತಿದೆ.
ಕೋವಿಡ್ 2ನೇ ಅಲೆಯನ್ನ ನಿಭಾಯಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಅವರನ್ನ ಸಚಿವ ಸಂಪುಟದಿಂದ ಕೈ ಬಿಡಬೇಕು ಅನ್ನೋ ಸಲಹೆ ಮೇರೆಗೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸುಧಾಕರ ಅವರನ್ನ ಕೈ ಬಿಡಲು ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದು, ಇದು ಎಷ್ಟು ಸತ್ಯ ಅನ್ನೋದು ಶೀಘ್ರದಲ್ಲೇ ತಿಳಿಯಲಿದೆ.