ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜಿಲ್ಲೆಯ ಆಲಮೇಲ ಪಟ್ಟದ ಸುತ್ತಮುತ್ತ ಕಳೆದ ರಾತ್ರಿ ಭರ್ಜರಿ ಮಳೆಯಾಗಿದೆ. ಹೀಗಾಗಿ ಕುರತ್ತಹಳ್ಳಿಯ ಹಳ್ಳ ತುಂಬಿ ಹರಿಯುತ್ತಿದ್ದು, ಇದರಲ್ಲಿ ರೈತನೊಬ್ಬ ಕೊಚ್ಚಿಕೊಂಡು ಹೋದ ಶಂಕೆ ವ್ಯಕ್ತವಾಗಿದೆ.
ಬಸವಂತರಾಯ ಅಂಬಾಗೋಳ (55) ಅನ್ನೋ ರೈತ ರಾತ್ರಿ ಜಮೀನಿಗೆ ಹೋದವರು ಬೆಳಗ್ಗೆಯಾದ್ರೂ ಬಂದಿಲ್ಲ. ಹೀಗಾಗಿ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.