ಪ್ರಜಾಸ್ತ್ರ ಸುದ್ದಿ
ಅಳ್ನಾವರ: ತಾಲೂಕಿನಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ರೈಲ್ವೆ ಸೇತುವೆ ಕೆಳಗೆ ನೀರು ತುಂಬಿಕೊಂಡಿದ್ದು, ವಾಹನ ಸವಾರರು ಸೇರಿದಂತೆ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ.
ಪ್ರತಿ ಬಾರಿ ಮಳೆಯಾದಗೆಲೆಲ್ಲ ಇಲ್ಲಿ ಇದೇ ಪರಿಸ್ಥಿತಿ. ಅಳ್ನಾವರದಿಂದ ಹಳಿಯಾಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇರುವುದು ಇದೊಂದೆ. ಅಳ್ನಾವರ ತಾಲೂಕು ಪ್ರವಾಹ ಪೀಡಿತ ಪ್ರದೇಶವಾಗಿದೆ. ಕೇಂದ್ರದಿಂದ ಬಂದ ತಂಡ ವೀಕ್ಷಣೆ ಮಾಡಿ ಹೋಗಿದೆ. ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇಷ್ಟೆಲ್ಲ ಸಮಸ್ಯೆಯಾಗುತ್ತಿದ್ದರೂ ಇದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಈ ಭಾಗದ ಜನಪ್ರತಿನಧಿಗಳು, ಅಧಿಕಾರಿಗಳು ಕೆಲಸ ಮಾಡದೆ ಇರುವುದಕ್ಕೆ ಜನರ ಪರದಾಟ ಮುಂದುವರೆದಿದ್ದು, ಈಗ್ಲಾದರೂ ಇತ್ತ ಗಮನಹರಿಸಬೇಕಿದೆ.