ಅಥಣಿ: ತಾಲೂಕಿನ ಹಲ್ಯಾಳ ಗ್ರಾಮದ ಸದಾಶಿವ ಮುತ್ಯಾ ದೇವಸ್ಥಾನದ ಆವರಣದಲ್ಲಿ ಹಾಗೂ ಜನವಸತಿ ಪ್ರದೇಶಗಳಲ್ಲಿ ಮಳೆ ನೀರು ನಿಂತುಕೊಂಡಿದೆ. ಇದ್ರಿಂದಾಗಿ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗ್ತಿದೆ.
ಸಾರ್ವಜನಿಕರು ದಿನ ನಿತ್ಯ ಸಂಚರಿಸುವ ರಸ್ತೆಯಲ್ಲಿ ನೀರು ನಿಂತುಕೊಂಡಿದೆ. ಹೀಗಾಗಿ ಮುಂದೆ ದಾರಿ ಇಲ್ಲದ್ದರಿಂದ ಪ್ರದೇಶವಲ್ಲ ಕೊಳಚೆಯಾಗ್ತಿದೆ. ಇದ್ರಿಂದಾಗಿ ಮಲೇರಿಯಾ ಬರುವ ಸಾಧ್ಯತೆಯಿದೆ. ಈ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಹಾಗೂ ವಾರ್ಡ್ ಸದಸ್ಯರುಗಳಿಗೆ ನಿವಾಸಿಗಳು ತಿಳಿಸಿದರು ಕೂಡಾ ಯಾರು ಕ್ಯಾರೆ ಅನ್ನುತ್ತಿಲ್ಲವೆಂದು ನಿವಾಸಿಗಳು ಆರೋಪಿಸಿದ್ದಾರೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.