ವರುಣನ ಆರ್ಭಟಕ್ಕೆ ಬಾಳೆ ಗಿಡಗಳು ನಾಶ

330

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಭಾರೀ ಗಾಳಿ ಮಳೆಗೆ ಬಾಳೆ ಗಿಡಗಳು ನೆಲಕ್ಕೆ ಉರುಳಿವೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ ಬಾಳೆ ಗಿಡಗಳು ಸಂಪೂರ್ಣವಾಗಿ ನಾಶವಾಗಿವೆ.

ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆ, ಗಾಳಿಯಿಂದ ಗ್ರಾಮದ ಸುಮಾರು 14 ಜನ ರೈತರ ಹೊಲಗಳಲ್ಲಿ ಬೆಳೆದಿದ್ದ ಬಾಳೆ ಗಿಡಗಳು ಮುರಿದು ಬಿದ್ದಿವೆ. ನಾಲತವಾಡದ ನಾಗಬೇನಾಳ, ವೀರೇಶನಗರದಲ್ಲಿರುವ ಸುಮಾರು 30 ಎಕರೆಯಲ್ಲಿ ಬೆಳೆದಿದ್ದ ಬಾಳೆ ಗಿಡಗಳು ಹಾಳಾಗಿವೆ.

ವರುಣನ ಆರ್ಭಟಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ನಿರ್ಮಾಣವಾಗಿದೆ. ಪ್ರಕೃತಿ ಮುನಿಸಿನಿಂದ ರೈತರ ಬದುಕು ಮತ್ತಷ್ಟು ಹೈರಾಣಗ್ತಿದೆ. ಹೀಗಾಗಿ ಸರ್ಕಾರ ಪರಿಹಾರ ನೀಡುವಂತೆ ರೈತರ ಆಗ್ರಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!