ಭಾರೀ ಮಳೆಗೆ ನಿರ್ದೇಶಕ ರಘುರಾಮ್ ಮನೆತುಂಬ ನೀರು

194

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕಳೆದ ರಾತ್ರಿ ಭರ್ಜರಿ ಮಳೆಯಾಗಿದೆ. ಜಯನಗರ, ವಿಲ್ಸನ್ ಗಾರ್ಡನ್, ಕಲಾಸಿಪಾಳ್ಯ, ಕೋರಮಂಗಲ, ವಿವೇಕ ನಗರ, ಎಂಜಿ ರೋಡ್, ಶಾಂತಿನಗರ, ಮಾರತಹಳ್ಳಿ, ಸರ್ಜಾಪುರ, ಕೆ.ಆರ್ ಪುರಂ ಸೇರಿದಂತೆ ಅನೇಕ ಕಡೆ ಭಾರೀ ಮಳೆಯಾಗಿದೆ.

ವರುಣನ ಆರ್ಭಟಕ್ಕೆ ಹಲವಾರು ಮನೆಗಳಿಗೆ ನೀರು ನುಗ್ಗಿವೆ. ಅದರಲ್ಲಿ ನಟ, ನಿರ್ದೇಶಕ ರಘುರಾಮ್ ಅವರ ಮನೆಯೂ ಒಂದು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಬಿಬಿಎಂಪಿ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ನಗರದ ಅನೇಕ ಕಡೆ ಇದೆ ರೀತಿ ಸಮಸ್ಯೆ ಎದುರಾಗಿದೆ. ಪ್ರತಿ ಭಾರಿ ವ್ಯಾಪಕ ಮಳೆಯಾದಗಲೆಲ್ಲ ಜನರಿಗೆ ಸಮಸ್ಯೆ ತಪ್ಪಿದ್ದಲ್ಲ. ಯಾವುದೇ ಸರ್ಕಾರ ಬಂದರೂ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಆಗಿಲ್ಲ.




Leave a Reply

Your email address will not be published. Required fields are marked *

error: Content is protected !!