ಅಪಾರ ಮಳೆ: ಕುಂದಾನಗರಿಯಲ್ಲಿ 19,035 ಜನರ ರಕ್ಷಣೆ

215

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕುಂದಾನಗರಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಇದ್ರಿಂದಾಗಿ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿಗಳು ಹಾನಿಯಾಗಿವೆ. ಎಲ್ಲೆಲ್ಲೂ ನೀರು ತುಂಬಿಕೊಂಡಿದ್ದು 37 ರಸ್ತೆಗಳು ಬಂದ್ ಆಗಿವೆ. 19,035 ಜನರನ್ನ ಇದುವರೆಗೂ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.

ಈ ವೇಳೆ 8,790ಕ್ಕೂ ಹೆಚ್ಚು ಜನರಿಗೆ ತಾತ್ಕಾಲಿಕ ನೆರವು ಒದಗಿಸಲಾಗಿದೆ. 89 ಆಶ್ರಯ ಕೇಂದ್ರಗಳನ್ನ ತೆರೆಯಲಾಗಿದೆ. ಪ್ರತಿಯೊಂದು ತಾಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನ ನೇಮಿಸಲಾಗಿದ್ದು, ಯಾವುದೇ ರೀತಿಯ ರಕ್ಷಣೆಗೆ ಸಂಬಂಧಿಸಿದಂತೆ ಅವರನ್ನ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!