ಪ್ರಜಾಸ್ತ್ರ ಸುದ್ದಿ
ಚಿಕ್ಕೋಡಿ: ಅಪಾರ ಪ್ರಮಾಣದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಾದ್ಯಂತ ನೆರೆಯ ಸಮಸ್ಯೆ ಎದುರಾಗಿದೆ. ಹೀಗಾಗಿ ಭಾನುವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದ್ರು. ಇದಾದ ಬಳಿಕ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತ್ನಾಡಿದ್ರು.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಂಜೆ ಹೈಕಮಾಂಡ್ ನಿಂದ ಸೂಚನೆ ಬರಲಿದೆ. ಅಲ್ಲಿಯವರೆಗೂ ಕಾದು ನೋಡಿ. ನಿಮಗೂ ತಿಳಿಯಲಿದೆ ಅಂತಾ ಹೇಳಿದ್ರು. ಇನ್ನು ದಲಿತ ಸಿಎಂ ಚರ್ಚೆ ಶುರುವಾಗಿದ್ದು ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದಲಿತ ಸಿಎಂ ನೇಮಕ ನಾನು ಮಾಡಲ್ಲ. ಹೈಕಮಾಂಡ್ ತೀರ್ಮಾನಿಸುತ್ತೆ ಎಂದರು.
ಪ್ರವಾಹ ವೀಕ್ಷಣೆ ಸಂಬಂಧ ಬೆಳಗಾವಿಗೆ ಆಗಮಿಸಿದ್ದೇನೆ. ಮಳೆಯಿಂದಾಗಿ ಸಾಕಷ್ಟು ನಷ್ಟವಾಗಿದೆ. ಜನರೊಂದಿಗೆ ನಾನು ಇರುತ್ತೇನೆ. ಯಾರೂ ಹೆದರುವ ಅಗತ್ಯವಿಲ್ಲ ಎಂದು ಹೇಳುವ ಮೂಲಕ, ಸಾರ್ವಜನಿಕರಿಗೆ ವಿಶ್ವಾಸ ಮೂಡಿಸಿದ್ರು.