ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಾಡಿನ ತುಂಬಾ ಭರ್ಜರಿಯಾಗಿ ಮಳೆಯಾಗ್ತಿದೆ. ಹೀಗಾಗಿ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ದೇ, ಸಾಕಷ್ಟು ಬೆಳೆ ಹಾನಿ, ಮನೆ ಹಾನಿ ಹಾಗೂ ಜೀವ ಹಾನಿ ಸಹ ಸಂಭವಿಸ್ತಿವೆ. ಹೀಗಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಲಿದ್ದು, ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಉತ್ತರ ಕರ್ನಾಟಕ ಭಾಗದ ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೆಳಗಾಗಿ, ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಈಗಾಗ್ಲೇ ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.