ಬಿದ್ದ ಮನೆ, ಹಾಳಾದ ಬೆಳೆ ಪರಿಹಾರಕ್ಕೆ ಶಾಸಕ ಮನಗೂಳಿ ಸಿಎಂಗೆ ಮನವಿ

356

ಪ್ರಜಾಸ್ತ್ರ ಸುದ್ದಿ

ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನಲ್ಲಿ ಇತ್ತೀಚಿಗೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದ್ರಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿನ ಬೆಳೆಗಳು ಹಾಳಾಗಿವೆ. ಅನೇಕ ಗ್ರಾಮಗಳಲ್ಲಿ ಮನೆಗಳು ಕುಸಿದು ಬಿದ್ದಿವೆ. ಹೀಗಾಗಿ ಜನರು ಸಂಕಷ್ಟ ಎದುರಿಸ್ತಿದ್ದಾರೆ.

ಈ ಸಂಬಂಧ ಸಿಂದಗಿ ಮತಕ್ಷೇತ್ರದ ಶಾಸಕ ಎಂ.ಸಿ ಮನಗೂಳಿ ಅವರು ಸಿಎಂ ಬಿ.ಎಸ್ ಯಡಿಯೂರಪ್ಪನವರನ್ನ ಭೇಟಿಯಾಗಿ, ಹಾಳದ ಬೆಳೆ ಹಾಗೂ ಮನೆಗಳ ಸೂಕ್ತ ಸಮೀಕ್ಷೆ ನಡೆಸಿ, ಕೂಡಲೇ ಪರಿಹಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಸಿಎಂ ಜೊತೆಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಭಾಸ್ಕರ ಅವರಿಗೂ ಮನವಿ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!