ಧಾರವಾಡದಲ್ಲಿ ಭಾರೀ ಮಳೆ: ಪ್ರವಾಹದಲ್ಲಿ ಕೊಚ್ಚಿಹೋದ ಬಾಲಕಿ ಪತ್ತೆ

329

ಪ್ರಜಾಸ್ತ್ರ ಸುದ್ದಿ

ಧಾರವಾಡ: ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗ್ತಿದೆ. ಹೀಗಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅದೇ ರೀತಿ ಹುಬ್ಬಳ್ಳಿ-ಧಾರವಾಡದಲ್ಲಿ ಭಾರೀ ಮಳೆಯಾಗ್ತಿದ್ದು, ಪ್ರವಾಹದಲ್ಲಿ ಕೊಚ್ಚಿಹೋದ ಬಾಲಕಿ ಶವ ಪತ್ತೆಯಾಗಿದೆ.

ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ 3ನೇ ತರಗತಿ ವಿದ್ಯಾರ್ಥಿನಿ ಶ್ರೀದೇವಿ ಹಾಗೂ ಆಕೆ ತಾಯಿ ಹೊಲದಲ್ಲಿರುವ ತಂದೆಗೆ ನಿನ್ನೆ ಊಟ ಕೊಡಲು ಹೋಗ್ತಿದ್ದಾಗ, ರಸ್ತೆಯಲ್ಲಿ ಹರಿಯುತ್ತಿದ್ದ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ಳು. ಬಾಲಕಿಯನ್ನ ಮೇಲೆತ್ತಲು ಸ್ಥಳೀಯ ಯುವಕರ ಪ್ರಯತ್ನಿಸಿದ್ರೂ ಪ್ರಯೋಜನವಾಗಿರಿಲಿಲ್ಲ.

ನಂತರ ಎನ್ ಡಿಆರ್ ಎಫ್ ತಂಡ ಬಂದು ಬಾಲಕಿ ಪತ್ತೆಗಾಗಿ ಶೋಧ ನಡೆಸಿತು. ಇದೀಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.




Leave a Reply

Your email address will not be published. Required fields are marked *

error: Content is protected !!