ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ: ಮುಂದುವರೆದ ಶೋಧ

241

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ರಾಜ್ಯದ ವಿವಿಧಡೆ ಭಾರೀ ಮಳೆಯಾಗುತ್ತಿದ್ದು, ಸಾವು, ನೋವುಗಳು ಸಂಭವಿಸಿವೆ. ಮಳೆಯ ಆರ್ಭಟಕ್ಕೆ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಶಾಲೆ ಮುಗಿಸಿಕೊಂಡು ಮನೆಗೆ ಹೋಗುತ್ತದ್ದಾಗ ಕಂಬಿಹಳ್ಳಿ ಹತ್ತಿರದ ಕಾಫಿ ಎಸ್ಟೇಟ್ ನೊಳಗಿನ ಹಳ್ಳದಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಸುಪ್ರಿತಾ ಕೊಚ್ಚಿಕೊಂಡು ಹೋಗಿದ್ದಾಳೆ. ನಿನ್ನೆಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.

ನಿನ್ನೆ ಸಂಜೆ 4 ಗಂಟೆಗೆ ಶಾಲೆ ಬಿಟ್ಟ ನಂತರ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಛತ್ರಿ ಗಾಳಿಗೆ ಹಾರಿ ಹೋಗಿದೆ. ಅದನ್ನು ಹಿಡಿಯಲು ಹೋದ ಬಾಲಕಿ ಕೊಚ್ಚಿಕೊಂಡು ಹೋಗಿದ್ದಾಳೆ. ಹೀಗೆ ಹೋದ ಬಾಲಕಿಗಾಗಿ ಶೋಧ ಕಾರ್ಯ ಮುಂದುವರೆದಿದೆ.




Leave a Reply

Your email address will not be published. Required fields are marked *

error: Content is protected !!