ಅಮರನಾಥದಲ್ಲಿ ಕನ್ನಡಿಗರು ಸುರಕ್ಷಿತ: ಸಿಎಂ ಬೊಮ್ಮಾಯಿ

231

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಮರನಾಥ ಕ್ಷೇತ್ರದಲ್ಲಿ ಭರ್ಜರಿ ಮಳೆಯಾಗುತ್ತಿದೆ. ಅದ್ಯಾವ ಪರಿ ಇದೆ ಅಂದರೆ ಬೆಟ್ಟ ಗುಡ್ಡಗಳು ಕುಸಿದು ಹೋಗಿವೆ. 15ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಅಪಾರ ಸಂಖ್ಯೆಯ ಯಾತ್ರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದಿಂದ ಹೋದ ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಿಂದ ನೂರಕ್ಕೂ ಹೆಚ್ಚು ಜನರು ಅಮರನಾಥ ಯಾತ್ರೆಗೆ ಹೋಗಿದ್ದಾರೆ. ಅವರೆಲ್ಲ ಸುರಕ್ಷಿತವಾಗಿದ್ದಾರೆ. ಕನ್ನಡಿಗರಿಗಾಗಿಯೇ ಕಾಲ್ ಸೆಂಟರ್ ತೆರೆಯಲಾಗಿದೆ. 15-20 ಜನರು ಸಹಾಯವಾಣಿಗೆ ಫೋನ್ ಮಾಡಿದ್ದರು. ಸರ್ಕಾರದ ಮುಖ್ಯಕಾರ್ಯದರ್ಶಿ ಜಮ್ಮು ಕಾಶ್ಮೀರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!