ಪ್ರಜಾಸ್ತ್ರ ಸುದ್ದಿ
ತಿರುಪತಿ: ನೆರೆಯ ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ರಣಭೀಕರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಒಂದೇ ದಿನದಲ್ಲಿ 17 ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಡಪಾ, ಚಿತ್ತೂರು, ಅನಂತಪುರ, ಕರ್ನೂಲ್ ಜಿಲ್ಲೆಗಳಲ್ಲಿ ಸುರಿದ ಅಪಾರ ಪ್ರಮಾಣದ ಮಳೆಗೆ ಇಷ್ಟೊಂದು ಅನಾಹುತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಆಗುತ್ತಿರುವ ಮಳೆಗೆ ಆಸ್ತಿ ಪಾಸ್ತಿ ಹಾನಿಯನ್ನು ಅಂದಾಜಿಸುವುದು ಕಷ್ಟವಾಗಿದೆ. ಬಂಗಾಳ ಕೊಲ್ಲಿ ವಾಯುಭಾರದ ಕುಸಿತ ಆಂಧ್ರದ ಮೇಲೆ ದೊಡ್ಡ ಪರಿಣಾಮ ಬೀರಿದೆ.