ಬಾಗಲಕೋಟೆಯಲ್ಲಿ ಇನ್ನೂ 2 ದಿನ ಶಾಲಾ, ಕಾಲೇಜುಗಳಿಗೆ ರಜೆ

349

ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಟ ಮುಂದುವರೆದಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿನ ಶಾಲೆಗಳಿಗೆ ಇನ್ನೂ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆಯಿಂದಾಗಿ ಕೃಷ್ಣ, ಮಲಪ್ರಭಾ, ಘಟಪ್ರಭಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಭಾಗದ ಜನರು ಕಂಗಾಲಾಗಿದ್ದು, ನಿರಾಶ್ರಿತ ಕೇಂದ್ರಗಳಲ್ಲಿ ಉಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದ್ರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟೆ ಜಿಲ್ಲಾಧಿಕಾರಿ ಆರ್ ರಾಮಚಂದ್ರನ್ ಶಾಲಾ, ಕಾಲೇಜುಗಳಿಗೆ ಇನ್ನೂ ಎರಡು ದಿನ ರಜೆ ಘೋಷಣೆ ಮಾಡಿದ್ದಾರೆ.

ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹ ಮಳೆಯಾಟ ಮುಂದುವರೆದಿದ್ದು ಅಲ್ಲಿಯೂ ಸಹ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಸಸಿಕಾಂತ ಸಿಂಥಿಲ್ ಆದೋಶ ಹೊರಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!