ಮಧ್ಯಾಹ್ನ ಸಿಎಂ ಸಿಲಿಕಾನ್ ಸಿಟಿ ರೌಂಡ್ಸ್

206

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೇಘರಾಜನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಅಕ್ಷರಶಃ ನಲುಗಿ ಹೋಗಿದೆ. ಸರ್ಕಾರದ ವಿರುದ್ಧ ಸಾರ್ವಜನಿಕರು ಕಿಡಿ ಕಾರುತ್ತಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್ ಮೂಲಕ ಹಾನಿಯಾದ ಪ್ರದೇಶಗಳ ವೀಕ್ಷಿಸಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಹಾನಿಗಿಡಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬೊಮ್ಮನಹಳ್ಳಿ, ಮಹದೇವಪುರ, ಸರ್ಜಾಪುರ್, ಬೆಳ್ಳಂದೂರ ಔಟರ್ ರಿಂಗ್ ರೋಡ್ ಸೇರಿದಂತೆ 20ಕ್ಕೂ ಹೆಚ್ಚು ಕಡೆ ಹಾನಿಯಾಗಿದೆ. ಇನ್ನು ಬಡಾವಣೆಗಳು ಲೆಕ್ಕಕ್ಕೆ ಇಲ್ಲ. 125ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು ಪರಿಹಾರ ನೀಡಲು ಕಂದಾಯ ಇಲಾಖೆಗೆ ಸೂಚಿಸಿದ್ದಾರೆ.

ಕಳೆದ 3 ತಿಂಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸತತ ಮಳೆಯಿಂದ ಕೆರೆ, ಕಟ್ಟೆಗಳು ತುಂಬಿಕೊಂಡಿವೆ. ಕಾಲುವೆಗಳು ಒಡೆದು ನೀರು ಹೊರ ನುಗ್ಗಿದ ಪರಿಣಾಮ ಇಷ್ಟೊಂದು ಅನಾಹುತ ಸೃಷ್ಟಿಯಾಗಿದೆ. ಇದು ಬರೀ ಬೆಂಗಳೂರು ಮಾತ್ರವಲ್ಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೆ ಸಮಸ್ಯೆಯಾಗಿದೆ.




Leave a Reply

Your email address will not be published. Required fields are marked *

error: Content is protected !!