ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅತಿಯಾದ ಮಳೆಯಿಂದ ಇಡೀ ಬೆಂಗಳೂರು ತೀವ್ರ ಸಮಸ್ಯೆ ಎದುರಿಸುತ್ತಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿಲಿಕಾನ್ ಸಿಟಿಯ ಮರ್ಯಾದೆ ಹೋಗುತ್ತಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ದೋಸೆ ತಿನ್ನಲು ಹೋಟೆಲ್ ಗೆ ಅದನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿ ವರ್ಣನೆ ಮಾಡಿರುವುದಕ್ಕೆ ಕಾಂಗ್ರೆಸ್ ಸೇರಿದಂತೆ ಸಾರ್ವಜನಿಕರು ವಾಗ್ದಾಳಿ ನಡೆಸಿದ್ದಾರೆ.
ಮತಿ ದೋಷ ಇರುವವರನ್ನು ಆಯ್ಕೆ ಮಾಡಿದೆ ಜನ ಮುಳುಗುವಾಗ ದೋಸೆ ತಿನ್ನಲು ಹೋಗುತ್ತಾರೆ. ಬೆಂಗಳೂರು ಮುಳುಗಿದೆ. ಜನತೆ ಪರದಾಡುತ್ತಿದ್ದಾರೆ. ಆದರೆ, ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ದೋಸೆ ತಿನ್ನುವ ಟೆಂಪ್ಟ್ ಆಗಿದೆಯಂತೆ. ಮಕ್ಕಳಾಟ ಆಡಿಕೊಂಡಿದ್ದ ಅಪ್ರಬುದ್ಧರನ್ನು ಸಂಸದರನ್ನಾಗಿಸಿದರೆ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಟ್ವೀಟರ್ ನಲ್ಲಿ ಕಿಡಿ ಕಾರಲಾಗಿದೆ.