ಸಿಡಿಲು ಬಡಿದು ಮಹಿಳೆ ಸಾವು

326

ಪ್ರಜಾಸ್ತ್ರ ಸುದ್ದಿ

ದೇವರ ಹಿಪ್ಪರಗಿ: ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆ ಹಾಗೂ ಎಮ್ಮೆ ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಗ್ರಾಮದಲ್ಲಿ ಸಿಡಿಲು ಸಹಿತ ಸುರಿದ ಭಾರೀ ಮಳೆಯಿಂದಾಗಿ ಈ ಅನಾಹುತ ಸಂಭವಿಸಿದೆ.

ಜೈನಾಬಿ ನಜೀರ್ ಅಹ್ಮದ್ ಸಿಪಾಯಿ(54) ಮೃತ ಮಹಿಳೆಯಾಗಿದ್ದಾರೆ. ಕುಟುಂಬ ಸಮೇತ ಹೊಲಕ್ಕೆ ಕೆಲಸಕ್ಕೆ ಹೋದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದರು. ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!