ಪ್ರಜಾಸ್ತ್ರ ಸುದ್ದಿ
ಧಾರವಾಡ: ರಾಜ್ಯದ ತುಂಬಾ ವ್ಯಾಪಕವಾದ ಮಳೆಯಾಗುತ್ತಿದೆ. ಹೀಗಾಗಿ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಇನ್ನು ವಿದ್ಯಾಕಾಶಿಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಜನರು ಕಂಗಾಲಾಗಿದ್ದಾರೆ.
ವರುಣನ ಆರ್ಭಟಕ್ಕೆ ಅಳನಾವರ ತಾಲೂಕಿನ ಮೂರು ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಅಲ್ಲದೆ, ಅಳನಾವರ ಹಾಗೂ ಖಾನಪುರ ನಡುವಿನ ಸಂಚಾರ ಬಂದ್ ಆಗಿದೆ. ಯಲ್ಲಾಪುರ ತಾಲೂಕಿನ ಅರಬೈಲ್ ಗುಡ್ಡ ಕುಸಿದಿದೆ. ಹೀಗಾಗಿ ಕಲಘಟಗಿ ಬಳಿಯೇ ವಾಹನಗಳು ಸಾಲುಗಟ್ಟಿ ನಿಂತಿವೆ.