ಭಾರೀ ಮಳೆ: ಧಾರವಾಡದಲ್ಲಿ 150 ವಿದ್ಯಾರ್ಥಿಗಳ ರಕ್ಷಣೆ

227

ಪ್ರಜಾಸ್ತ್ರ ಸುದ್ದಿ

ಧಾರವಾಡ: ವಿದ್ಯಾಕಾಶಿಯಲ್ಲಿ ಭಾರೀ ಮಳೆಯಾಗುತ್ತಿದೆ. ಗುರುವಾರ ಸಹ ಭರ್ಜರಿಯಾಗಿ ಮಳೆಯಾಗಿದೆ. ಇದರಿಂದಾಗಿ ಅಮರಗೋಳದಲ್ಲಿನ ಹಳ್ಳಗಳು ತುಂಬಿ ಹರಿಯುತ್ತಿವೆ. ನೀರಿನ ಹರಿವು ಹೆಚ್ಚಾಗಿ ಸರ್ಕಾರಿ ಪ್ರೌಢಶಾಲೆಯ ಸುತ್ತ ನೀರು ತುಂಬಿಕೊಂಡಿತ್ತು.

ಶಾಲೆಯ ಸುತ್ತ ನೀರು ಆವರಿಸಿಕೊಂಡಿದ್ದರಿಂದ 150 ವಿದ್ಯಾರ್ಥಿಗಳು ಹೊರ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿ ನೀರಿನ ಮಟ್ಟ ಕಡಿಮೆಯಾದ ನಂತರ ಕಾರ್ಯಕಾಚರಣೆ ನಡೆಸಿ, ಟ್ರ್ಯಾಕ್ಟರ್ ಮೂಲಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!