ಹಾಸನದಲ್ಲಿ ಮಳೆ ಸೃಷ್ಟಿಸಿದ ಅವಾಂತರ

271

ಪ್ರಜಾಸ್ತ್ರ ಸುದ್ದಿ

ಹಾಸನ: ಬುಧವಾರ ಮುಂಜಾನೆ ಭರ್ಜರಿಯಾಗಿ ಸುರಿದ ಮಳೆ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹಾಸನ ನಗರ ಹಾಗೂ ವಿವಿಧ ತಾಲೂಕುಗಳಲ್ಲಿ ಉತ್ತಮ ಮಳೆಯಾಗುವುದರ ಜೊತೆಗೆ ಸಾಕಷ್ಟು ಅವಾಂತರ ಸೃಷ್ಟಿಸಿದೆ.

ಆಂಜನೇಯ ಹೊಸಹಳ್ಳಿ ಕೆರೆ ಕೋಡಿ ಬಿದ್ದಿದೆ. ರಾಮನಾಥಪುರ ಹೋಬಳಿಯಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಕೊಚ್ಚಿ ಹೋಗಿದೆ. ಅರಕಲಗೂಡು ತಾಲೂಕಿನ ಶಿರದನಹಳ್ಳಿ ಹತ್ತಿರ ರಸ್ತೆ ಸಂಚಾರ ಬಂದ್ ಆಗಿದೆ. ಅರಕಲಗೂಡು-ಕೇರಳಾಪುರ ನಡುವೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ನಡುವೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಹೀಗಾಗಿ ಜನರ ಪರದಾಟ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!