ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ತುಂಬಾ ಗುರುವಾರ ಭರ್ಜರಿ ಮಳೆಯಾಗಿದೆ. ಇಡೀ ದಿನ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಲೆನಾಡು ಸೇರಿದಂತೆ ಹಲವು ಕಡೆ ಭರ್ಜರಿ ಮಳೆಯಾಗಿದೆ.
ಭಾರೀ ಪ್ರಮಾಣದ ಮಳೆಯಿಂದಾಗಿ ಕೆಲವು ಕಡೆ ಪ್ರವಾಹ ಭೀತಿ ಎದುರಾಗಿದೆ. ಬೀದರ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಚಿಂಚೋಳಿಯಲ್ಲಿ 33 ವರ್ಷದ ಮಹಿಳೆಯೊಬ್ಬರ ಮೇಲೆ ಗೋಡೆ ಕುಸಿದುಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ. ಹೀಗಾಗಿ ಹಲವು ಕಡೆ ಆಸ್ತಿ ಹಾನಿ ಜೊತೆಗೆ ಜೀವ ಹಾನಿ ಸಹ ಆಗಿದೆ.