ಅರ್ಧ ದಶಕದಲ್ಲೇ ಹೆಚ್ಚು ಮಳೆ: ತಮಿಳುನಾಡಿಗೆ ಹೆಚ್ಚುವರಿ ನೀರು

158

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಜೂನ್ 1ರಿಂದ ಆಗಸ್ಟ್ 31ರ ತನಕ ಭಾರೀ ಮಳೆಯಾಗಿದೆ. ಹೀಗಾಗಿ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ನಿರ್ಮಾಣವಾಗಿದೆ. ಇದು ಕಳೆದ 51 ವರ್ಷಗಳಲ್ಲೇ ಅಧಿಕ ಮಳೆ ಎಂದು ತಿಳಿದು ಬಂದಿದೆ. ಈಗ ನೆರೆಯ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡಲಾಗುತ್ತಿದೆ.

ಕಾವೇರಿ ಜಲಾನಯದ ಪ್ರದೇಶದ ಎಲ್ಲ ಜಲಾಶಯಗಳು ತುಂಬಿವೆ. ಹೀಗಾಗಿ ಜಲ ವರ್ಷದ ಹಿನ್ನೆಲೆಯಲ್ಲಿ ಜೂನ್ ನಿಂದ ಮೇ ತನಕ 47 ಟಿಎಂಸಿ ಹೆಚ್ಚುವರಿ ನೀರು ಬಿಡಲಾಗಿದೆ. ಅಲ್ಲದೇ ಈ ಬಾರಿ ಈಗಾಗ್ಲೇ ಕಾವೇರಿ ನೀರನ್ನು ತಮಿಳುನಾಡಿನ ಬಿಳಿಗುಂಡ್ಲು ಜಲಾಶಯಕ್ಕೆ 224 ಟಿಎಂಸಿ ನೀರು ಬಿಡಲಾಗಿದೆ.

ಬೆಂಗಳೂರಿನಲ್ಲಿ ಶೇಕಡ 226 ಹೆಚ್ಚು ಮಳೆಯಾಗಿದೆ. ಸೆಪ್ಟೆಂಬರ್ 1ರಿಂದ 9ರ ತನಕ ರಾಜ್ಯದಲ್ಲಿ ಶೇಕಡ 142ರಷ್ಟು ಹೆಚ್ಚು ಮಳೆಯಾಗಿದೆ. ಹಾರಂಗಿ, ಕಬಿನಿ, ಕೆಆರ್ ಎಸ್, ಹೇಮಾವತಿ, ಕೃಷ್ಣ ಸೇರಿದಂತೆ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಹೀಗಾಗಿ ತಮಿಳುನಾಡಿಗೆ ಹೆಚ್ಚುವರಿಗಾಗಿ 47 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!