ರಾಜ್ಯದ ತುಂಬಾ ಮಳೆ.. ಮಳೆ.. ಮಳೆ…

208

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದೆಲ್ಲೆಡೆ ವರುಣನ ಆರ್ಭಟ ಮುಂದುವರೆದಿದೆ. ಅಲ್ಲದೇ ಪಕ್ಕದ ಕೇರಳ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿಯೂ ಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ, ಮಲೆನಾಡು, ಅರೆಮಲೆನಾಡು, ಸಿಲಿಕಾನ್ ಸಿಟಿ, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ಎಲ್ಲೆಡೆ ಮಳೆ ಅಬ್ಬರಿಸುತ್ತಿದೆ.

ಇನ್ನು ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆಯಂತೆ. ಈಗಾಗ್ಲೇ ಎಲ್ಲೆಡೆ ಗುಡ್ಡ ಕುಸಿತ, ಮರಗಳು ಧರೆಗುರುಳಿದ್ದು, ಹೊಲಗಳಿಗೆ ನೀರು ನುಗ್ಗಿ ಬೆಳೆ ಹಾಳಾಗಿರುವುದು ಸೇರಿದಂತೆ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, 4 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!