ಮಳೆ ಸೃಷ್ಟಿಸಿದ ಅವಾಂತರ

247

ಪ್ರಜಾಸ್ತ್ರ ಸುದ್ದಿ

ಕೋಲಾರ: ಶನಿವಾರ ತಡರಾತ್ರಿ ಭರ್ಜರಿಯಾಗಿ ಸುರಿದ ಮಳೆ ತಾಲೂಕಿನ ಹಲವು ಕಡೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ತಾಲೂಕಿನ ಅರಹಳ್ಳಿ, ಹೂವಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ.

ಭಾರೀ ಮಳೆಯಿಂದಾಗಿ ಜಮೀನುಗಳಲ್ಲಿ ನೀರು ತುಂಬಿಕೊಂಡಿವೆ. ಹೀಗಾಗಿ ಬಹುತೇಕ ಜಮೀನುಗಳು ಜಲಾವೃತಗೊಂಡಿವೆ. ಇದರಿಂದಾಗಿ ಸೇವಂತಿಗೆ, ರಾಗಿ ಬೆಳೆ ಸಂಪೂರ್ಣ ನಾಶವಾಗಿದೆ. ವಾಡಿಕೆಗಿಂತ ಈ ವರ್ಷ ಹೆಚ್ಚು ಮಳೆಯಾಗಿದೆ. ಮಳೆಯಿಂದ ಬೆಳೆಹಾನಿಯಾದ ರೈತರು ಪರಿಹಾರಕ್ಕೆ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!