ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಸಾವಿರಾರು ಎಕರೆ ಜಮೀನು ಸಂಪೂರ್ಣ ಜಲಾವೃತವಾಗಿದೆ. ಅಲ್ದೇ, ಅಬ್ಬರದ ಮಳೆಯಿಂದಾಗಿ ಇಬ್ಬರು ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಇನ್ನು ಸಂತ್ರಸ್ತ ಜನರಿಗೆ ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ನಿರತವಾಗಿದೆ.
ಬುಧವಾರ ತುಂಗಾನದಿಯಲ್ಲಿ ಮಹಿಳೆಯಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ. ಇನ್ನೊಂದು ಕಡೆ ಶಿಕಾರಿಪುರ ತಾಲೂಕಿನ ಚಿಕ್ಕಂಗಡಿ ಗ್ರಾಮದ ರೈತರೊಬ್ಬರು ವಿದ್ಯುತ್ ಸ್ಪರ್ಷಿಸಿ ಮೃತಪಟ್ಟಿದ್ದಾರೆ. ಶಿಕಾರಿಪುರದ ಐದು ಹಾಗೂ ಸೊರಬ ತಾಲೂಕಿನ ನಾಲ್ಕು ಗ್ರಾಮದಲ್ಲಿ ವಿದ್ಯುತ್ ಕಂಬಗಳು ಉರುಳಿದ್ದು ವಿದ್ಯುತ್ ಸಮಸ್ಯೆಯಾಗ್ತಿದೆ.