ಸಿಂದಗಿಯಲ್ಲಿ ವರುಣನ ಆರ್ಭಟ: ಬೂದಿಹಾಳದಲ್ಲಿ ಮೂವರ ರಕ್ಷಣೆ

593

ಪ್ರಜಾಸ್ತ್ರ ಸುದ್ದಿ

ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನಾದ್ಯಂತ ಭರ್ಜರಿ ಮಳೆಯಾಗ್ತಿದೆ. ಇದ್ರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಲ್ದೇ, ತಾಲೂಕಿನ ಗ್ರಾಮಗಳಲ್ಲಿರುವ ಹಳ್ಳಗಳು ತುಂಬಿ ಹರಿಯುತ್ತಿವೆ. ಹೀಗಾಗಿ ಹಲಾವರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಾಲೂಕಿನ ಬೂದಿಹಾಳ ಪಿ.ಎಚ್ ಗ್ರಾಮದ ಹಳ್ಳದ ಆಚೆಯ ಹೊಲದಲ್ಲಿ ಸಿಲುಕಿ ಹಾಕಿಕೊಂಡಿದ್ದ 1 ಮಗು ಸೇರಿ ಮೂವರನ್ನ ಹಾಗೂ 4 ಜಾನುವಾರುಗಳನ್ನ ರಕ್ಷಣೆ ಮಾಡಲಾಗಿದೆ. ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರ ನೇತೃತ್ವದಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಸಹಾಯದಿಂದ ಸುರಕ್ಷಿತವಾಗಿ ಅವರನ್ನ ಕರೆದುಕೊಂಡು ಬರಲಾಗಿದೆ. ಈ ವೇಳೆ ಕಂದಾಯ ನಿರೀಕ್ಷಕ ಐ.ಎಂ ಮಕಾನಾದರ ಸೇರಿದಂತೆ ಸಿಬ್ಬಂದಿ ಹಾಜರಿದ್ರು.




Leave a Reply

Your email address will not be published. Required fields are marked *

error: Content is protected !!