ರಾಜ್ಯದಲ್ಲಿ ಭರ್ಜರಿ ಮಳೆ: ಈ ಭಾಗದ ಶಾಲಾ ಕಾಲೇಜುಗಳಿಗೆ ರಜೆ

343

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ನಾಡಿನ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭರ್ಜರಿ ಮಾಳೆಯಾಗುವ ಲಕ್ಷಣಗಳಿವೆ ಎಂದು ತಿಳಿದು ಬಂದಿದೆ. ಹೀಗಾಗಿ ಈ ಭಾಗದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಭಾಗದ ಜಿಲ್ಲೆಗಳ ಸರ್ಕಾರಿ ಮತ್ತ ಖಾಸಗಿ ಶಾಲಾ ಕಾಲೇಜುಗಳಿವೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ 48 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿಯಲ್ಲಿ ಮಳೆ ಮುಂದುವರೆದಿದ್ದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜೆ.ಜಗದೀಶ ತಿಳಿಸಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ರಜೆ ಘೋಷಣೆ ಮಾಡಲಾಗಿದೆ ಅಂತಾ ಜಿಲ್ಲಾಧಿಕಾರಿ ಸಿಂಧು ರೂಪೇಶ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!