ಇನ್ನೂ ಎರಡ್ಮೂರು ದಿನ ಭರ್ಜರಿ ಮಳೆ

332

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭರ್ಜರಿಯಾಗಿ ಮಳೆಯಾಗಲಿದೆ ಎನ್ನಲಾಗ್ತಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಆಗಾಗ ಜಿಟಿಜಿಟಿ ಮಳೆಯಾಗ್ತಿದೆ.

ಇನ್ನು ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಅತಿವೃಷ್ಟಿ ಉಂಟಾಗಿದೆ. ಇನ್ನು ಕೆಲವು ಕಡೆ ಮಳೆಯೇ ಇಲ್ಲ. ಒಂದೇ ಭಾಗದಲ್ಲಿ ತದ್ವಿರುದ್ಧ ಪರಿಸ್ಥಿತಿಯಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣ, ಘಟಪ್ರಭಾ, ಭೀಮಾ ನದಿ ಪಾತ್ರದ ಗ್ರಾಮಗಳ ಜನರಿಗೆ ಈಗಾಗ್ಲೇ ಎಚ್ಚರಿಸಲಾಗಿದೆ. ಇನ್ನೂ ಎರಡ್ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ.




Leave a Reply

Your email address will not be published. Required fields are marked *

error: Content is protected !!