ಪ್ರಜಾಸ್ತ್ರ ಸುದ್ದಿ
ಮಂಡ್ಯ: ಭಾರೀ ಮಳೆ ಗಾಳಿಯಿಂದಾಗಿ ಮೊಸಳೆಕೊಪ್ಪಲು ಗ್ರಾಮದಲ್ಲಿ ಭಾರೀ ಗಾತ್ರದ ಮರಗಳು ನೆಲಕ್ಕುರುಳಿವೆ. ಅಲ್ದೇ, ತೆಂಗು, ಅಡಿಕೆ, ಬಾಳೆ ಸೇರಿದಂರೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿವೆ.
ರಾತ್ರಿ ಸುರಿದ ಮಳೆಯಿಂದಾಗಿ ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು ಸಹ ಬಿದ್ದಿಉ, ಗ್ರಾಮದ ರಸ್ತೆ ಸಂಪರ್ಕ ಬಂದ್ ಆಗಿದೆ. ಇನ್ನೆರಡು ದಿನಗಳಲ್ಲಿ ಕೈಗೆ ಬರಬೇಕಿದ್ದ ರೇಷ್ಮೆ ಬೆಳೆ ಸಹ ನಾಶವಾಗಿದೆ. ಇದ್ರಿಂದಾಗಿ ರೈತರು ಕಂಗಾಲಾಗಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೆ ಸ್ಥಳಕ್ಕೆ ಆಗಮಿಸಿ ರೈತರ ನೆರವಿಗೆ ಬರಬೇಕೆಂದು ಕೇಳಿಕೊಂಡಿದ್ದಾರೆ.