ಪ್ರಜಾಸ್ತ್ರ ಸುದ್ದಿ
ತುಮಕೂರು: ಭಾರೀ ಮಳೆಯಿಂದಾಗಿ ಕಳೆದ ಮೂರು ದಿನಗಳ ಹಿಂದೆ ಕಾಲುವೆಯಲ್ಲಿ ಕೊಚ್ಚಿ ಹೋದ ಅಮ್ಮದ್ ಖಾನ್ ಕುಟುಂಬಕ್ಕೆ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಅವರು ಪರಿಹಾರ ಘೋಷಿಸಿದ್ದಾರೆ.
ಮೃತ ಅಮ್ಮದ್ ಖಾನ್ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮೂರು ದಿನಗಳ ಸತತ ಪ್ರಯತ್ನದ ನಂತರ ಅಮ್ಮದ್ ಖಾನ್ ಮೃತದೇಹ ಪತ್ತೆಯಾಗಿದೆ. ಈ ವೇಳೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.