ಪ್ರಜಾಸ್ತ್ರ ಸುದ್ದಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಭಾನುವಾರ ಕಡಿಮೆಯಾಗಿದ್ದ ಮಳೆ ಇಂದು ಮತ್ತೆ ಶುರುವಾಗಿದೆ.
ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ ಹಿನ್ನೆಲೆ ಜುಲೈ 4 ಹಾಗೂ 5ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭರ್ಜರಿ ಮಳೆ, ಗಾಳಿಯ ಜೊತೆಗೆ ಸಮುದ್ರದ ಆರ್ಭಟ ಹೆಚ್ಚುವ ಸಾಧ್ಯತೆಯಿದೆ. ಹೀಗಾಗಿ ಈ ಭಾಗದ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.