ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉಡುಪಿ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯವಸ್ಥವಾಗಿದೆ. ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಾಳೆ ಬಜೆಟ್ ಅಧಿವೇಶನ ಮುಗಿಸಿಕೊಂಡು ಉಡುಪಿಗೆ ಹೋಗುತ್ತೇನೆ. ಈಗಾಗ್ಲೇ ಅಲ್ಲಿನ ಜಿಲ್ಲಾಧಿಕಾರಿಯಿಂದ ನೆರೆಪೀಡಿತ ಪ್ರದೇಶಗಳ ಕುರಿತು ಮಾಹಿತಿ ಪಡೆದಿದ್ದೇನೆ. ನಾಳೆ ಅಲ್ಲಿಗೆ ಹೋಗಿ ಅಧಿಕಾರಿಗಳ ಸಭೆ ನಡೆಸಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗುತ್ತೆ ಅಂತಾ ಹೇಳಿದ್ದಾರೆ.