ಪ್ರಜಾಸ್ತ್ರ ಸುದ್ದಿ
ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭರ್ಜರಿ ಮಳೆಗೆ ನಾಡಿನ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಇದ್ರಿಂದಾಗಿ ಆಲಮಟ್ಟಿ ಜಲಾಶಯದ 26 ಗೇಟ್ ಗಳನ್ನ ತೆರೆದು ಬಿಡಲಾಗಿದೆ.
1.50 ಲಕ್ಷ ಕ್ಯುಸೆಕ್ಸ್ ಒಳ ಹರಿವು ದಾಖಲಾಗಿದೆ. ಜಲಾಶಯ ಹತ್ತಿರದ ಗ್ರಾಮಗಳ ಮೀನುಗಾರರು, ಗ್ರಾಮಸ್ಥರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಹಾನಾಡಿನ ಮಳೆ ರಾಜ್ಯಕ್ಕೆ ಮತ್ತೆ ಕಂಟಕವಾಗುವ ಲಕ್ಷಣಗಳು ಗೋಚರಿಸ್ತಿವೆ.