ಪ್ರಜಾಸ್ತ್ರ ಸುದ್ದಿ
ನವದೆಹಲಿ: ಹೆಲಿಕಾಪ್ಟರ್ ಮೂಲಕ ಫಟಾದಿಂದ ಕೇದರನಾಥ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಪತನಗೊಂಡು 6ಕ್ಕೂ ಹೆಚ್ಚು ಯಾತ್ರಿಕರು ಸಾವನ್ನಪ್ಪಿದ್ದಾರೆ. ಇದರಲ್ಲಿ 8 ಜನರು ಪ್ರಯಾಣ ಮಾಡುತ್ತಿದ್ದರು.
ಕೇದರನಾಥಕ್ಕೆ ಭೇಟಿ ನೀಡಿ ವಾಪಸ್ ಆಗುತ್ತಿದ್ದಾಗ ರುದ್ರಪ್ರಯಾಗದಿಂದ 2 ಕಿಲೋ ಮೀಟರ್ ದೂರದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ. ಪ್ರತಿಕೂಲ ಹವಾಮಾನದಿಂದಾಗಿ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ.