ಬೆಳಗಾವಿ: ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗೆ ದಾನಿಗಳು ಮುಂದೆ ಬರಬೇಕೆಂದು ಸಿಎಂ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಪ್ರವಾಹದ ಪರಿಸ್ಥಿತಿಯನ್ನ ಅವಲೋಕಿಸ್ತಿರುವ ಸಿಎಂ ಅವರು, ಇನ್ನೂ ಮೂರು ದಿನಗಳ ಕಾಲ ಇಲ್ಲಿಯೇ ಇರುವುದಾಗಿ ಹೇಳಿದ್ದಾರೆ.
ಇನ್ನು ವರುಣನ ಅಬ್ಬರಕ್ಕೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದ್ದು ಸುಮಾರು 5 ಸಾವಿರ ಕೋಟಿ ಹಣದ ಅಗತ್ಯವಿದೆ ಎಂದು ಹೇಳಿದ್ದಾರೆ. ಹೀಗಾಗಿ ದಾನಿಗಳು ನೆರವಿನ ಹಸ್ತ ಚಾಚಬೇಕೆಂದು ಕೇಳಿಕೊಂಡಿದ್ದಾರೆ. ಇದೇ ವೇಳೆ ಇನ್ಫೋಸಸ್ ನ ಸುಧಾಮೂರ್ತಿ ಅವರು ನೆರೆ ಸಂತ್ರಸ್ತರ ನೆರವಿಗೆ 10 ಕೋಟಿ ರೂಪಾಯಿ ನೀಡಿದ್ದಾರೆ ಅಂತಾ ತಿಳಿಸಿದ್ರು.
ನೆರವಿನ ಟೈಂನಲ್ಲಿ ದೋಣಿ, ಬೋಟ್, ಹೆಲಿಕಾಪ್ಟರ್ ಗಳನ್ನ ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಿಯಂದು ಅಧಿಕಾರಿಗಳಿಗೆ ಹೇಳಿದ್ದೇನೆ. ಪರಿಹಾರ ಕಾರ್ಯ ಭರದಿಂದ ಸಾಗಿದೆ ಅಂತಾ ಹೇಳಿದ್ರು. ಹಿಗಾಗಿ ನಿರಾಶ್ರಿತ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಯಿಲ್ಲ ಅಂತಾ ಸಿಎಂ ತಿಳಿಸಿದ್ದಾರೆ.