ಮುಖ್ಯಮಂತ್ರಿ ಬಗ್ಗೆ ಹೈಕಮಾಂಡ್ ನಿರ್ಧಾರ: ಮಲ್ಲಿಕಾರ್ಜನ್ ಖರ್ಗೆ

142

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣಗೆ ಸಂಬಂಧಿಸಿದಂತೆ ಭರ್ಜರಿ ತಯಾರಿ ನಡೆದಿದೆ. ಜೊತೆಗೆ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಅನ್ನೋ ಚರ್ಚೆ ಸಹ ಜೋರಾಗಿದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಹುದ್ದೆಗೆ ಏರಿದ ಮೇಲೆ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದ ಅವರನ್ನು ಕಲಬುರಗಿಯಲ್ಲಿ ಅದ್ಧೂರಿ ಸ್ವಾಗತ ಕೋರಲಾಗಿದೆ. ಈ ವೇಳೆ ಮಾತನಾಡಿದ ಅವರು, ನನಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ. ಯಾರೆ ಮುಖ್ಯಮಂತ್ರಿಯಾದರೂ ಬೆಂಬಲ ಇರುತ್ತೆ. ಆದರೆ, ಯಾರು ಮುಖ್ಯಮಂತ್ರಿ ಆಗಬೇಕು ಅನ್ನೋದು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.

ನಾವೆಲ್ಲ ಒಂದಾದರೆ ನಮ್ಮದೆ ಸರ್ಕಾರ ಬರುತ್ತೆ. ಕಚ್ಚಾಡಿದರೆ ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ. ಹಿಮಾಚಲದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲಿ. ಕರ್ನಾಟಕದಲ್ಲಿ ಬಿಜೆಪಿ ಅಭಿವೃದ್ಧಿ ಕೆಲಸ ಮಾಡಿಲ್ಲ. ಹೀಗಾಗಿ ಪ್ರಧಾನಿ ಮೋದಿ ಹೆಸರು ಜಪಿಸುತ್ತಾರೆ ಎಂದರು.




Leave a Reply

Your email address will not be published. Required fields are marked *

error: Content is protected !!